10/08/2026
ಬೆಳಗಾವಿ ಜಿಲ್ಲಾ ಪ್ರವಾಸದ ಅಂಗವಾಗಿ ಯರಗಟ್ಟಿ ತಾಲೂಕಿನ ಸೊಪಡ್ಲ ಗ್ರಾಮಕ್ಕೆ ಭೇಟಿ ನೀಡಿ, ರೈತರ ಸಮಸ್ಯೆಗಳು ಹಾಗೂ ಸ್ಥಳೀಯ ಪರಿಸ್ಥಿತಿಗಳ ಕುರಿತು ಮಾಹಿತಿ ಪಡೆದರು
ರಾಮದುರ್ಗ ತಾಲೂಕಿನ ಕೆ. ಚಂದ್ರಗಿರಿ ಕೆರೆಗೆ ಭೇಟಿ ನೀಡಿ, ಕೆರೆಯ ನೀರಿನ ಲಭ್ಯತೆ ಹಾಗೂ ರೈತರಿಗೆ ಅದರ ಪ್ರಯೋಜನಗಳ ಕುರಿತು ಪರಿಶೀಲನೆ ನಡೆಸಲಾಯಿತು.
ನಂತರ ರೈತ ಮುಖಂಡರ ತೋಟದ ಮನೆಯಲ್ಲಿ ರೈತರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ, ಕೃಷಿ, ನೀರಾವರಿ, ಬೆಳೆ ಹಾಗೂ ರೈತರ ಪ್ರಮುಖ ಸಮಸ್ಯೆಗಳ ಕುರಿತು ನೇರವಾಗಿ ಚರ್ಚಿಸಲಾಯಿತು.
ತದನಂತರ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ವಾಸ್ತವ ಪರಿಸ್ಥಿತಿಯನ್ನು ಅರಿತು, ರೈತರ ಧ್ವನಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಯಿತು.