12/08/2026
ನಾಳೆ ನಡೆಯಲಿರುವ ಕರ್ನಾಟಕ ಬಂದ್ ಅನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ್ ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮ ಕಾವೇರಿ ನೀರಿನ ಹಕ್ಕಿಗಾಗಿ ಹಾಗೂ ನಾಡಿನ ಹಿತದೃಷ್ಟಿಯಿಂದ ಈ ಹೋರಾಟ ಅನಿವಾರ್ಯವಾಗಿದೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಬಂದ್ ನಡೆಯಲಿದ್ದು, ಪ್ರತಿಯೊಬ್ಬ ಕನ್ನಡಿಗರೂ ಈ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಕೋರುತ್ತೇನೆ. ಕಾವೇರಿ ನಮ್ಮ ಜೀವನಾಡಿ, ಅದನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ನಾವೆಲ್ಲರೂ ಒಂದಾಗೋಣ