06/08/2026
ಕನ್ನಡ ಪುಸ್ತಕ ಪ್ರಾಧಿಕಾರವು ಇಂದು ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನ ಸಭಾಂಗಣದಲ್ಲಿ ಡಾ. ಅರವಿಂದ ಮಾಲಗತ್ತಿ ಅವರ ಸಮಗ್ರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಂಡಿತ್ತು.
ಹಿರಿಯ ಸಾಹಿತಿಗಳಾದ ಡಾ. ಸಿ.ಪಿ. ಕೃಷ್ಣಕುಮಾರ್ ಅವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡುವುದರೊಂದಿಗೆ ಕೃತಿಗಳನ್ನು ಲೋಕಾರ್ಪಣೆ ಮಾಡಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.. ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎನ್. ಕೆ. ಲೋಲಾಕ್ಷಿ ಇವರು ಮುಖ್ಯ ಅತಿಥಿಗಳಾಗಿ
ಭಾಗವಹಿಸಿದ್ದರು.
ಅಲ್ಲದೆ ಸಂಪುಟಗಳ ಲೇಖಕರಾದ ಡಾ. ಅರವಿಂದ ಮಾಲಗತ್ತಿ ಅವರು ಹಾಗೂ ಅವರ ಪತ್ನಿ ಡಾ ಧರಣಿದೇವಿ ಮಾಲಗತ್ತಿ ಉಪಸ್ಥಿತರಿದ್ದರು.
ಮಾಲಗತ್ತಿ ಸಂಪುಟಗಳ ಸಂಪಾದಕರಾದ ಡಾ. ಪ್ರಸನ್ನಕುಮಾರ್ ಎಂ. ಹಾಗೂ ಡಾ. ರಾಜೇಂದ್ರ ಬಡಿಗೇರ್ ಹಾಗೂ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ಅವರುಗಳು ಹಾಜರಿದ್ದರು.