Dr. B R Ambedkar Development Corporation Ltd

Dr. B R Ambedkar Development Corporation Ltd Contact information, map and directions, contact form, opening hours, services, ratings, photos, videos and announcements from Dr. B R Ambedkar Development Corporation Ltd, Government Organization, Visveswaraya Mini Towers, Bangalore.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ " ವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು.ನಿಗಮವು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು. ನಂತರ ನಿಗಮವನ್ನು 13.10.2005ರಲ್ಲಿ "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ" ಎಂದು ಮರು ನಾಮಕರಣ ಮಾಡಲಾಯಿತು.

ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಅವಕಾಶ.!ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸ...
13/12/2024

ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಅವಕಾಶ.!

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಸ್ವಯಂ-ಉದ್ಯೋಗ ನೇರ ಸಾಲ (ಕುರಿ ಸಾಕಾಣಿಕೆ) ಮತ್ತು ಸ್ವಾವಲಂಬಿ ಸಾರಥಿ ಫುಡ್ ಕಾರ್ಟ್ ಯೋಜನೆಗಳಿಗೆ ಅರ್ಜಿ ಸಲ್ಲಿಸಿ.
ಕೊನೆಯ ದಿನಾಂಕ: 29.12.2024

ಹೆಚ್ಚಿನ ವಿವರಗಳಿಗಾಗಿ 24/7 ಸಹಾಯವಾಣಿಯನ್ನು ಸಂಪರ್ಕಿಸಿ: 9482300400

Chief Minister of Karnataka
ಸಮಾಜ ಕಲ್ಯಾಣ ಇಲಾಖೆ Social Welfare Department
DR HC Mahadevappa
Sampath Raj

ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು!ನಮ್ಮ ಭಾರತೀಯ ಸಂವಿಧಾನವು 1.5 ಬಿಲಿಯನ್ ಭಾರತೀಯರ ಏಕತೆಯ ಸಂಕೇತವಾಗಿದೆ. ನ್ಯಾಯ, ಸ್ವಾತಂತ್ರ್ಯ ಮತ್ತು ಸಮ...
26/11/2024

ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು!
ನಮ್ಮ ಭಾರತೀಯ ಸಂವಿಧಾನವು 1.5 ಬಿಲಿಯನ್ ಭಾರತೀಯರ ಏಕತೆಯ ಸಂಕೇತವಾಗಿದೆ. ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ಹಾದಿಯಲ್ಲಿ ನಾವು ಒಗ್ಗಟ್ಟಿನಿಂದ ನಡೆಯೋಣ, ಇದೇ ನಮ್ಮ ನಿಗಮದ ಆಶಯವು ಕೂಡ.

2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊ...
11/09/2024

2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 10-10- 2024ರವರೆಗು ನಿಗದಿಪಡಿಸಲಾಗಿದೆ.

ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೆಳ್ಳಿಗೆ 9.30ಕ್ಕೆ ಮಾನವ ಸರಪಳಿ...
09/09/2024

ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೆಳ್ಳಿಗೆ 9.30ಕ್ಕೆ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದೆ.

'ಬನ್ನಿ ಎಲ್ಲರೂ ಕೈ ಜೋಡಿಸೋಣ
ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯೋಣ'..!

ಹೆಚ್ಚಿನ ಮಾಹಿತಿಗಾಗಿ: Democracydaykarnataka.in ಭೇಟಿ ನೀಡಿ.



ಸಮಾಜ ಕಲ್ಯಾಣ ಇಲಾಖೆ Social Welfare Department
Chief Minister of Karnataka
DR HC Mahadevappa

ದಿ. 20.07.2024 ರಂದು ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ 2...
20/07/2024

ದಿ. 20.07.2024 ರಂದು ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ 2019-20 ಮತ್ತು 2020-21 ಸಾಲಿನ ಫಲಾನುಭವಿಗಳಿಗೆ ಮಾನ್ಯ ವಿಧಾನ ಸಭೆ ಶಾಸಕರು ಪಂಪ್ ಸೆಟ್ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.
Chief Minister of Karnataka
DR HC Mahadevappa
ಸಮಾಜ ಕಲ್ಯಾಣ ಇಲಾಖೆ Social Welfare Department

ದಿ.08.07.2024 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ  ಫಲಾನುಭವಿ...
09/07/2024

ದಿ.08.07.2024 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಮಾನ್ಯ ವಿಧಾನ ಸಭಾ ಶಾಸಕರಾದ ಶ್ರೀ ಎಂ.ಟಿ ಕೃಷ್ಣಪ್ಪ ರವರು ಪಂಪ್ ಸೆಟ್ ವಿತರಿಸಿ ನಿಗಮದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇಂದು  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ,  ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ 2021-22 ಮತ್ತು 22-23 ನೇ ಸಾಲಿನ ಗಂಗಾ ಕಲ್ಯಾಣ ...
01/07/2024

ಇಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ,
ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ 2021-22 ಮತ್ತು 22-23 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿದ ಫಲಾನುಭವಿಗಳಿಗೆ ಇಂದು ಮಾನ್ಯ ಲೋಕಸಭಾ ಸಂಸದರಾದ ಶ್ರೀ BY ರಾಘವೇಂದ್ರ ರವರ ಸಮ್ಮುಖದಲ್ಲಿ ಪಂಪ್ ಸೆಟ್ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಭೋವಿ ನಿಗಮದ ಅಧ್ಯಕ್ಷರಾದ ಶ್ರೀ ರವಿ ಕುಮಾರ್ ರವರು ಮತ್ತು ನಿಗಮದ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Chief Minister of Karnataka
DR HC Mahadevappa
Sampath Raj
ಸಮಾಜ ಕಲ್ಯಾಣ ಇಲಾಖೆ Social Welfare Department

ಇಂದು ದಿ. 29.06.2024 ರಂದು ಡಾ ಬಿ. ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯನ್ನು  ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀ ಆರ್....
29/06/2024

ಇಂದು ದಿ. 29.06.2024 ರಂದು ಡಾ ಬಿ. ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯನ್ನು ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀ ಆರ್. ಸಂಪತ್ ರಾಜ್ ರವರು ನಡೆಸಿದರು. ಈ ಸಂದರ್ಭದಲ್ಲಿ ಸೌಲಭ್ಯಗಳ ಹಂಚಿಕೆ, ಯೋಜನೆಗಳ ಪ್ರಗತಿ ಮತ್ತು ಇತರೆ ಆಡಳಿತಾತ್ಮಕ ವಿಷಯಗಳ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ವ್ಯವಸ್ಥಾಪಕರುಗಳು ಭಾಗವಹಿಸಿದ್ದರು.
Chief Minister of Karnataka
DR HC Mahadevappa
Sampath Raj
ಸಮಾಜ ಕಲ್ಯಾಣ ಇಲಾಖೆ Social Welfare Department

ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ವಸತಿ ಶಾಲೆಗಳಲ್ಲಿ 50% ಸೀಟುಗಳನ್ನು ಈ ಕೆಳಗೆ ತಿಳಿಯಪಡಿಸಿರುವ ವರ್ಗದ ಮಕ್ಕಳಿಗೆ ಮೀಸಲಾಗಿ ಇಡಲಾಗಿದ್ದು ಅವರು ಇಲ...
20/06/2024

ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ವಸತಿ ಶಾಲೆಗಳಲ್ಲಿ 50% ಸೀಟುಗಳನ್ನು ಈ ಕೆಳಗೆ ತಿಳಿಯಪಡಿಸಿರುವ ವರ್ಗದ ಮಕ್ಕಳಿಗೆ ಮೀಸಲಾಗಿ ಇಡಲಾಗಿದ್ದು ಅವರು ಇಲಾಖೆಯ ಈ ಕೆಳಗಿನ ವೆಬ್ ಸೈಟ್ ಲಿಂಕ್ ಮೂಲಕ ನೇರವಾಗಿ ಯಾವುದೇ ಪರೀಕ್ಷೆ ಇಲ್ಲದೇ ಪ್ರವೇಶ ಪಡೆದುಕೊಳ್ಳಬಹುದಾಗಿದೆ :

ಪ್ರವೇಶಾತಿ ಲಿಂಕ್ :

https://cetonline.karnataka.gov.in/kreis24d

ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂ...
30/11/2023

ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.

ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2023-24 ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿಗಳ ಆಹ್ವಾನಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗ...
01/11/2023

ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2023-24 ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿಗಳ ಆಹ್ವಾನಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24*7 ಸಹಾಯ ವಾಣಿ 9482300400 ಕರೆ ಮಾಡಬಹುದು.

Address

Visveswaraya Mini Towers
Bangalore
560001

Opening Hours

Monday 10am - 5pm
Tuesday 10am - 5pm
Wednesday 10am - 5pm
Thursday 10am - 5pm
Friday 10am - 5pm
Saturday 10am - 5pm

Telephone

9845239226

Alerts

Be the first to know and let us send you an email when Dr. B R Ambedkar Development Corporation Ltd posts news and promotions. Your email address will not be used for any other purpose, and you can unsubscribe at any time.

Share