04/05/2026
ದಿನಾಂಕ: 03/05/2026 ರಂದು ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತು ವತಿಯಿಂದ ಪ್ರಪ್ರಥಮ ಬಾರಿಗೆ ಬೆಂಗಳೂರಿನ ವೆಂಕಟಪ್ಪ ಆರ್ಟ್ ಗ್ಯಾಲರಿಯಲ್ಲಿ 3 ದಿನಗಳ ಕಾಲ “ಚಿತ್ತಾರ - 2026” ಎಂಬ ಕಲಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಈ ಪ್ರದರ್ಶನದಲ್ಲಿ ಉದಯೋನ್ಮುಖ ಹಾಗೂ ಖ್ಯಾತ ಆರ್ಯವೈಶ್ಯ ದೃಶ್ಯ ಕಲಾವಿದರ ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು. ಕರ್ನಾಟಕದಾದ್ಯಂತ ಸುಮಾರು 35 ಜನ ಕಲಾವಿದರು ಭಾಗವಹಿಸಿ, 100 ಕ್ಕೂ ಹೆಚ್ಚು ಕಲಾಕೃತಿಗಳನ್ನು ಪ್ರದರ್ಶನ ಮಾಡಿದರು.
ಈ ಕಾರ್ಯಕ್ರಮಕ್ಕೆ ಸನ್ಮಾನ್ಯ ಶ್ರೀ ಕೆ.ವಿ. ರಾಮ್ ಪ್ರಸಾದ್ ರವರು, ಅಧ್ಯಕ್ಷರು, ಕರ್ನಾಟಕ ಆರ್ಯವೈಶ್ಯ ಅಭಿವೃದ್ದಿ ನಿಗಮ, ಕುಟುಂಬ ಸಮೇತರಾಗಿ ಭಾಗವಹಿಸಿ ಕಲಾಕೃತಿಗಳನ್ನು ವೀಕ್ಷಿಸಿದರು. ಇದೇ ವೇಳೆ ಶ್ರೀ ನಟರಾಜ್ ರವರು, ಅಧ್ಯಕ್ಷರು, ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ಅಶೋಕ ಟಿ.ಎನ್ ರವರು, ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.