VB-G RAM G BIDAR

VB-G RAM G BIDAR VB- G RAM G ಗ್ರಾಮೀಣ ಕುಟುಂಬಗಳಿಗೆ 125 ದಿನಗಳ ಖಾತರಿ ಉದ್ಯೋಗ ಮತ್ತು ಜೀವನೋಪಾಯ ಒದಗಿಸುವ ಕೇಂದ್ರ ಸರ್ಕಾರದ ಯೋಜನೆ.

ಮಾನ್ಯ ಗಿತ್ತೆ ಮಾಧವ್ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ದಿನಾಂಕ -03.09.2026 ರಂದು ಔರಾದ ತಾಲೂಕ...
04/09/2026

ಮಾನ್ಯ ಗಿತ್ತೆ ಮಾಧವ್ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ದಿನಾಂಕ -03.09.2026 ರಂದು ಔರಾದ ತಾಲೂಕಿನ ಕಂದಗೋಳ, ಜಂಬಗಿ, ಸಂತಪೂರ ಗ್ರಾಮ ಪಂಚಾಯತಿಗಳ ಭೇಟಿ ಪರಿಶೀಲನೆ ಹಾಗೂ ಜೆಜೆಎಂ, VB-G RAM G, ವಿವಿಧ ವಸತಿ ನಿಲಯಗಳ ಭೇಟಿ ಕುರಿತು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳ ನೋಟ್. Eshwar Khandre VB-G RAM G BIDAR

ಮಾನ್ಯ ಗಿತ್ತೆ ಮಾಧವ್ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು -02.09.2026 ರಂದು ಭಾಲ್ಕಿ ತಾಲೂಕಿನ ವಿ...
04/09/2026

ಮಾನ್ಯ ಗಿತ್ತೆ ಮಾಧವ್ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು -02.09.2026 ರಂದು ಭಾಲ್ಕಿ ತಾಲೂಕಿನ ವಿವಿಧ ವಸತಿ ನಿಲಯ ಮತ್ತು ಗ್ರಾಮ ಪಂಚಾಯತಿಗಳ ಭೇಟಿ, JJM ಮತ್ತು VB G RAM G ಕುರಿತು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳ ನೋಟ್.
Eshwar Khandre VB-G RAM G BIDAR

04/09/2026

ಸಿಇಒ ನಡೆ ಹೂಲಸೂರ ತಾಲೂಕಿನ ಗ್ರಾಮಗಳ ಕಡೆ ; ವಸತಿ ನಿಲಯ ಮತ್ತು ಅಂಗನವಾಡಿ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ.
Eshwar Khandre VB-G RAM G BIDAR

ಸಿಇಒ ನಡೆ ಹೂಲಸೂರ ತಾಲೂಕಿನ  ಗ್ರಾಮಗಳ ಕಡೆ ; ವಸತಿ ನಿಲಯ ಮತ್ತು ಅಂಗನವಾಡಿ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ.ಜಿಲ್ಲಾ ಪಂಚಾಯತ ಬೀದರ ಗಿತ್ತೆ ...
04/09/2026

ಸಿಇಒ ನಡೆ ಹೂಲಸೂರ ತಾಲೂಕಿನ ಗ್ರಾಮಗಳ ಕಡೆ ; ವಸತಿ ನಿಲಯ ಮತ್ತು ಅಂಗನವಾಡಿ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ.

ಜಿಲ್ಲಾ ಪಂಚಾಯತ ಬೀದರ ಗಿತ್ತೆ ಮಾಧವ ವಿಠ್ಠಲರಾವ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶುಕ್ರವಾರ ಬೆಳ್ಳಂ ಬೆಳಗ್ಗೆ ಹೂಲಸೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ಮೊದಲಿಗೆ ಜಲ ಜೀವನ್ ಮಿಷನ್ (JJM) ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಯೋಜನೆಯಿಂದ ಗ್ರಾಮಸ್ಥರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು ಮತ್ತು ಸರಿಯಾಗದ ಕಾಮಗಾರಿಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಂತರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳು, ಮೂಲಸೌಕರ್ಯ, ಔಷಧೋಪಚಾರ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಒದಗಿಸಲಾಗುತ್ತಿರುವ ಪೌಷ್ಟಿಕ ಆಹಾರ, ಶಿಕ್ಷಣ ಚಟುವಟಿಕೆಗಳು ಹಾಗೂ ಕೇಂದ್ರದ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮಕ್ಕಳ ಆರೋಗ್ಯ ಮತ್ತು ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

*ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ಭೇಟಿ*:

ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಸೌಕರ್ಯ, ವಸತಿ ವ್ಯವಸ್ಥೆ, ಆಹಾರ ಹಾಗೂ ಇತರೆ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ, ತದನಂತರ ಮೆಟ್ರಿಕ್ ಪೂರ್ವ ಬಾಲಕೀಯರ ವಸತಿ ನಿಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರ ವಾಸ್ತವ್ಯ, ಶಿಕ್ಷಣಕ್ಕೆ ಪೂರಕವಾದ ಸೌಲಭ್ಯಗಳು ಹಾಗೂ ಸ್ವಚ್ಛತೆ ಕುರಿತು ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿನಿಯರಿಗೆ ಉತ್ತಮ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಮಕ್ಕಳೊಂದಿಗೆ ಉಪಹಾರ ಸೇವಿಸಿದರು.

ನಂತರ *ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ಜಾ.–353) ಗೆ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ವಸತಿ ವ್ಯವಸ್ಥೆ, ಆಹಾರ, ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟವನ್ನು ಪರಿಶೀಲಿಸಿದರು.

ಮುಂದುವರಿದು ಅಂತರ ಭಾರತಿ ತಾಂಡಾಕ್ಕೆ ಭೇಟಿ ನೀಡಿ, ಅಲ್ಲಿನ ಸಾರ್ವಜನಿಕರ ಸಮಸ್ಯೆಗಳು ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಗ್ರಾಮೀಣ ಮತ್ತು ತಾಂಡಾ ಪ್ರದೇಶಗಳ ಜನರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳುವ ಅಗತ್ಯವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಜಲ ಜೀವನ್ ಮಿಷನ್ (JJM) ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ, ಕಾಮಗಾರಿಗಳ ಪ್ರಗತಿ ಮತ್ತು ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಹಾಗೂ ಗುಣಮಟ್ಟದೊಂದಿಗೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳು, ಶಾಲೆಯ ಮೂಲಸೌಕರ್ಯ, ಕುಡಿಯುವ ನೀರು, ಶೌಚಾಲಯ ಹಾಗೂ ಇತರೆ ಸೌಲಭ್ಯಗಳನ್ನು ಪರಿಶೀಲಿಸಿದರು.

*ತೊಗಲೂರು ಗ್ರಾಮ ಪಂಚಾಯತಿಗೆ ಭೇಟಿ

ಈ ಸಂದರ್ಭದಲ್ಲಿ ವಿಬಿ-ಜಿ ರಾಮ್ ಜಿ (VB-G RAM G) ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಯೋಜನೆಯ ಉದ್ದೇಶದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿ ನಂತರ ಇದೇ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಒದಗಿಸಲಾಗುತ್ತಿರುವ ಪೌಷ್ಟಿಕ ಆಹಾರ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ಚಟುವಟಿಕೆಗಳು ಸೇರಿದಂತೆ ಕೇಂದ್ರದ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಹಾದೇವ ಕಾರ್ಯನಿರ್ವಾಹಕ ಅಧಿಕಾರಿಗಳು,ಸಿಡಿಪಿಒ ಅಧಿಕಾರಿ, ನೀರು ಸರಬರಾಜು ಇಲಾಖೆಯ ಅಧಿಕಾರಿ, ಸಹಾಯಕ ನಿರ್ದೇಶಕ , ಜೆಜೆಎಂ, ವಿಬಿಜಿ ರಾಮ ಜಿ ಯೋಜನೆಯ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಇತರರು ಇದ್ದರು.

ದಿನಾಂಕ - 03.09.2026 ರಂದು ಮಾನ್ಯ ಗಿತ್ತೆ ಮಾಧವ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು, ಔರಾದ ತಾಲೂ...
03/09/2026

ದಿನಾಂಕ - 03.09.2026 ರಂದು ಮಾನ್ಯ ಗಿತ್ತೆ ಮಾಧವ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು, ಔರಾದ ತಾಲೂಕಿನ ಜಂಬಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಚಾಲ್ತಿಯಲ್ಲಿರುವ ಸಿಸಿಟಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ಮಾಡಿ ಕೂಲಿಕಾರರೊಂದಿಗೆ ಸಂಭಾಷಣೆ ನಡೆಸಿದರು.

ನಂತರ ಸಂತಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ (PHC) ಹಾಗೂ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಆರೋಗ್ಯ ಸೇವೆ, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಯ ಸಿಬ್ಬಂದಿ ವರ್ಗದವರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದರ್ಶನ ನೀಡಿದರು.

Eshwar Khandre VBgramg Karnataka

ದಿನಾಂಕ - 03.09.2026 ರಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ಅವರು, ಔರಾದ ( ಬಿ ) ತಾಲೂಕಿನ ವಡಗಾಂವ ಗ್ರಾಮದ...
03/09/2026

ದಿನಾಂಕ - 03.09.2026 ರಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ಅವರು, ಔರಾದ ( ಬಿ ) ತಾಲೂಕಿನ ವಡಗಾಂವ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ (PHC), ಅಂಗನವಾಡಿ ಕೇಂದ್ರ, ವಸತಿ ನಿಲಯ ಸೇರಿದಂತೆ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ, ಸಿಬ್ಬಂದಿಯ ಹಾಜರಾತಿ, ಸಾರ್ವಜನಿಕರಿಗೆ ದೊರೆಯುತ್ತಿರುವ ಸೇವೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕುರಿತು ಪರಿಶೀಲನೆ ಮಾಡಿದರು.

ನಂತರ ಸೇವೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರಿಕೆ ವಹಿಸಿ ಕೆಲಸ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ನಿರ್ದೇಶನ ನೀಡಿದರು.

VBgramg Karnataka Eshwar Khandre

ದಿನಾಂಕ - 03.09.2016 ರಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ಅವರು, ಔರಾದ ( ಬಿ ) ತಾಲೂಕಿನ ವಡಗಾಂವ ಮೆಟ್ರಿ...
03/09/2026

ದಿನಾಂಕ - 03.09.2016 ರಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ಅವರು, ಔರಾದ ( ಬಿ ) ತಾಲೂಕಿನ ವಡಗಾಂವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದರು.

ಇದೇ ವೇಳೆ ವಿದ್ಯಾರ್ಥಿಗಳ ಹಾಜರಾತಿ, ವಸತಿ ವ್ಯವಸ್ಥೆ, ಆಹಾರದ ಗುಣಮಟ್ಟ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
Eshwar Khandre VB-G RAM G BIDAR

ದಿನಾಂಕ - 02.09.2026 ರಂದು ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗ್ರಾಪಂ ವ್ಯಾಪ್ತಿಯ ಕರಡ್ಯಾಳ, ಧಾರಜವಾಡಿ, ಹಾಗೂ ಭಾತಂಬ್ರಾ ಗ್ರಾ...
03/09/2026

ದಿನಾಂಕ - 02.09.2026 ರಂದು ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗ್ರಾಪಂ ವ್ಯಾಪ್ತಿಯ ಕರಡ್ಯಾಳ, ಧಾರಜವಾಡಿ, ಹಾಗೂ ಭಾತಂಬ್ರಾ ಗ್ರಾಮಗಳಿಗೆ ಮಾನ್ಯ ಗಿತ್ತೆ ಮಾಧವ ವಿಠ್ಠಲರಾವ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ, ವಿವಿಧ ಓಣಿಗಳಲ್ಲಿ ಸುತ್ತಾಡಿದ ಅವರು, ಜಲ ಜೀವನ್ ಅಭಿಯಾನ-ಮನೆ-ಮನೆಗೆ ಗಂಗೆ ಕಾರ್ಯಕ್ರಮದಡಿ ಗ್ರಾಮದ ಪ್ರತಿಯೊಂದು ಮನೆಗೆ ಅಳವಡಿಸಿದ ನೀರಿನ ನಳದ ತೊಟ್ಟಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖುದ್ದಾಗಿ ಪರಿಶೀಲಿಸಿ ಈ ಕುರಿತು ಜನರಿಂದ ಅಭಿಪ್ರಾಯ ಕೇಳಿದರು.

ಈ ವೇಳೆ ನೀರು ಪೂರೈಕೆ ವಿಷಯವಾಗಿ ಕಂಡುಬಂದ ಸಮಸ್ಯೆಗಳಿಗೆ ತಕ್ಷಣವೇ ಪರಿಹರಿಸಬೇಕು ಎಂದು ಸ್ಥಳದಲ್ಲಿದ್ದ ಪಿಡಿಒ ಹಾಗೂ ಜೆಜೆಎಂ ಅಧಿಕಾರಿಗಳಿಗೆ ಸೂಚಿಸಿದರು.
VBgramg Karnataka Eshwar Khandre

ದಿನಾಂಕ - 02.09.2026 ರಂದು ಮಾನ್ಯ ಗಿತ್ತೆ ಮಾಧವ ವಿಠ್ಠಲರಾವ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು, ಭಾಲ್ಕಿ ತಾಲ...
03/09/2026

ದಿನಾಂಕ - 02.09.2026 ರಂದು ಮಾನ್ಯ ಗಿತ್ತೆ ಮಾಧವ ವಿಠ್ಠಲರಾವ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು, ಭಾಲ್ಕಿ ತಾಲೂಕಿನ ಕೋನಮೇಳಕುಂದ ಗ್ರಾಮದ ಹೊರ ವಲಯದಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಊಟ-ಪಾಠ, ಆರೋಗ್ಯ ವಿಚಾರಿಸಿದರು.

ನಂತರ ವಿದ್ಯಾರ್ಥಿಗಳು ಮಲಗುವ ಕೋಣೆ, ಹಾಸಿಗೆ ಹಾಗೂ ವಸತಿ ನಿಲಯ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಆಗಾಗ ಬಾಲಕ ಹಾಗೂ ಬಾಲಕಿಯರ ಆರೋಗ್ಯ ತಪಾಸಣೆ ನಡೆಸಬೇಕು. ಪ್ರೌಢಾವಸ್ಥೆಯಲ್ಲಿ ಮಕ್ಕಳಿಗೆ ಆರೋಗ್ಯ ಇಲಾಖೆಯು ನೀಡುವ ಲಸಿಕೆಗಳನ್ನು ಕಡ್ಡಾಯವಾಗಿ ಕೊಡಿಸಬೇಕು ಎಂದು ನಿಲಯದ ಸಿಬ್ಬಂದಿಗೆ ನಿರ್ದೇಶಿಸಿ, ನಂತರ ವಿದ್ಯಾರ್ಥಿಗಳೊಂದಿಗೆ ಸಾಲಿನಲ್ಲಿ ಕುಳಿತು ಬೆಳಿಗ್ಗೆಯ ಉಪಹಾರ ಸವಿದು ಸಸಿ ನೆಟ್ಟರು.

VBgramg Karnataka Eshwar Khandre

ದಿನಾಂಕ - 03.09.2025 ರಂದು ಮಾನ್ಯ ಗಿತ್ತೆ ಮಾಧವ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ಬೀದರ ಜಿಲ್ಲ...
03/09/2026

ದಿನಾಂಕ - 03.09.2025 ರಂದು ಮಾನ್ಯ ಗಿತ್ತೆ ಮಾಧವ ವಿಠ್ಠಲರಾವ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ರವರು ಬೀದರ ಜಿಲ್ಲೆಯ ಔರಾದ ( ಬಿ ) ತಾಲೂಕಿನ ಕಂದಗೋಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ, ಮಕ್ಕಳ ಬೆಳವಣಿಗೆ ದಾಖಲಾತಿ ಹಾಗೂ ಕೇಂದ್ರದ ಸ್ವಚ್ಛತೆಯನ್ನು ಪರಿಶೀಲಿಸಿದರು. ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು.ಅಂಗನವಾಡಿ ಕೇಂದ್ರಗಳು ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಅಡಿಪಾಯವಾಗಿರುವುದರಿಂದ ಅವುಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

Eshwar Khandre VBgramg Karnataka

Address

Bidar
585401

Website

Alerts

Be the first to know and let us send you an email when VB-G RAM G BIDAR posts news and promotions. Your email address will not be used for any other purpose, and you can unsubscribe at any time.

Shortcuts

Share