12/07/2026
ನಮಸ್ಕಾರ ಗೆಳೆಯರೇ ನನ್ನ ಮತಕ್ಷೇತ್ರ
ಗೌರಿಬಿದನೂರಿನ ವಿ.ಕ್ಷೇತ್ರದ ಜನತೆಗೆ
☪️🕉️✝️
ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ, 6 ದಶಕಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ.
ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು, ಆ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ ಮೂಲಕ ಸೃಷ್ಟಿಸಿದ್ದ ಸಂಗೀತಶಾರದೆಯ ವರಪುತ್ರಿ ಅವರು.
ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಮತ್ತು ಕೋಟ್ಯಂತರ ಸಂಗೀತ ಪ್ರಿಯರಿಗೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಇಂತಿ
#ಕೆಂಪರಾಜು_ಕೆ
ನಿಮ್ಮ ಸೇವಾಕಾಂಕ್ಷಿ
2023 ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ