02/09/2026
ಹು-ಧಾ ಪೂರ್ವ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ್ತಷ್ಟು ಬಲ!
ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಿವಿಧ ಸಮಾಜಗಳ ಯುವ ಮುಖಂಡರು ಭಾರತೀಯ ಜನತಾ ಪಕ್ಷದ ಸಿದ್ಧಾಂತ, ಅಭಿವೃದ್ಧಿ ಪರ ಚಿಂತನೆ ಹಾಗೂ ನಾಯಕತ್ವವನ್ನು ಮೆಚ್ಚಿ ಮಂಡಲ ಅಧ್ಯಕ್ಷರಾದ ಶ್ರೀ ಮಂಜುನಾಥ ಕಾಟಕರ್, ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಶ್ರೀ ಮಹೇಶ ತಪೇಲಾ, ಅವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಿಂಗರಾಜ ಪಾಟೀಲ ಅವರ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಶ್ರೀ ನವೀನ ಜಿಂಧೆ ಅವರ ನೇತೃತ್ವದ ಯುವಕರ ತಂಡ ಸೇರ್ಪಡೆಯಿಂದ ಪೂರ್ವ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿ ದೊರಕಿದ್ದು, ಮುಂಬರುವ ದಿನಗಳಲ್ಲಿ ಜನಸೇವೆಗೆ ಹೊಸ ಉತ್ಸಾಹ ಮತ್ತು ಬಲ ಸಿಗಲಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶಿವು ಮೆಣಸಿನಕಾಯಿ, ಶ್ರೀ ವಸಂತ ನಾಡಜೋಶಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಂಗಾ ಕಠಾರೆ, ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.
#ಬಿಜೆಪಿಹುಬ್ಬಳ್ಳಿಧಾರವಾಡಮಹಾನಗರಜಿಲ್ಲೆ
#ಬಿಜೆಪಿಹುಬ್ಬಳ್ಳಿಧಾರವಾಡಪೂರ್ವ
#ಪಕ್ಷಸೇರ್ಪಡೆ