28/07/2026
📢 ಚಿಕ್ಕನಾಯಕನಹಳ್ಳಿಯಲ್ಲಿ ಕಾಂಗ್ರೆಸ್ 'ಸಂಘಟನಾ ಸೃಜನ ಅಭಿಯಾನ' ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣೆ 🤝✨
ಇಂದು ಚಿಕ್ಕನಾಯಕನಹಳ್ಳಿ ನಗರದ ಹೊಯ್ಸಳ ಪಾರ್ಟಿ ಹಾಲ್ನಲ್ಲಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ 'ಸಂಘಟನಾ ಸೃಜನ ಅಭಿಯಾನ' ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. 🏛️✋
ಈ ಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (AICC) ಪಕ್ಷದ ಉಸ್ತುವಾರಿಗಳು ಹಾಗೂ ಜಿಲ್ಲಾ ವೀಕ್ಷಕರಾದ ಸಂಗೀತಾ ಬೇನಿವಾಲ್ ರವರು ಭಾಗವಹಿಸಿ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಹಾಗೂ ಮುಖಂಡರ ಅಭಿಪ್ರಾಯಗಳನ್ನು ಆಲಿಸಿದರು. 🗳️📝
💬 ಸಭೆಯಲ್ಲಿ AICC ವೀಕ್ಷಕರಾದ ಸಂಗೀತಾ ಬೇನಿವಾಲ್ ಅವರ ಮಾತುಗಳು:
"ಕರ್ನಾಟಕದ ರಾಜಕೀಯ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ತುಂಬಾ ಚೆನ್ನಾಗಿದೆ. ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಸ್ತಾಂತರವಾಗಿದೆ. ಇದು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶಕ್ತಿ ನೀಡಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದೀರಿ, ಬಹಳ ಸಂತೋಷ. ನಾವೆಲ್ಲರೂ ಯಾವ ಒತ್ತಡಕ್ಕೂ ಒಳಗಾಗದೆ ಎಲ್ಲರನ್ನು ಒಳಗೊಳ್ಳುವ, ಪಕ್ಷ ಸಂಘಟನೆಗೆ ಸಮರ್ಥ ಎನಿಸುವ ವ್ಯಕ್ತಿಗಳ ಹೆಸರನ್ನು ಸೂಚಿಸುವ ಮೂಲಕ ರಾಹುಲ್ ಗಾಂಧಿ ಅವರ ಆಶಯವನ್ನು ಈಡೇರಿಸುವ ಕೆಲಸ ಮಾಡೋಣ."
👥 ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಮುಖ ನಾಯಕರು:
KPCC ವೀಕ್ಷಕರು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಕುಮಾರ್, ರೇಖಾ ಹುಲಿಯಪ್ಪಗೌಡ, ಮಿಲಿಂದ್ ಧರ್ಮಸೇನ್, ಮಾಜಿ ಶಾಸಕರಾದ ಕೆ. ಎಸ್. ಕಿರಣ್ ಕುಮಾರ್, ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಿ. ಚಂದ್ರಶೇಖರಗೌಡ, ಪ್ರಧಾನ ಕಾರ್ಯದರ್ಶಿ ಸುಜಾತಾ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಇರ್ಫಾನ್, ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸಿ. ಡಿ. ಚಂದ್ರಶೇಖರ್, ಹಾಗೂ ಹುಳಿಯಾರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪಿ. ಟಿ. ಚಿಕ್ಕಣ್ಣ ಅವರು ಉಪಸ್ಥಿತರಿದ್ದರು.
ಅಲ್ಲದೆ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪಂಚಾಕ್ಷರಯ್ಯ, ರಾಮಯ್ಯ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ
ಗೋಡೆಕೆರೆ ಜಗದೀಶ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ✊🇮🇳