Taluk Panchayath Kunigal

  • Home
  • Taluk Panchayath Kunigal

Taluk Panchayath Kunigal Rural Development and Panchayat Raj - Karnataka

ಕುಣಿಗಲ್ ತಾಲ್ಲೂಕು ಪಂಚಾಯಿತಿ ವತಿಯಿಂದ ಸಾರ್ವಜನಿಕ ಮಾಹಿತಿ, ಯೋಜನೆಗಳ ವಿವರ, ಸಭೆ, ಕಾರ್ಯಕ್ರಮಗಳ ಅಪ್ಡೇಟ್

ಸಂತೆಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮದಲ್ಲಿ ಸ್ವಚ್ಛತೆ ಮತ್ತು ...
03/06/2026

ಸಂತೆಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮದಲ್ಲಿ ಸ್ವಚ್ಛತೆ ಮತ್ತು ಆರೋಗ್ಯಕರ ಪರಿಸರ ಕಾಪಾಡುವ ಉದ್ದೇಶದಿಂದ ಚರಂಡಿ ಸ್ವಚ್ಛತೆ, ಕಸ ವಿಲೇವಾರಿ, ಸಾರ್ವಜನಿಕ ಸ್ಥಳಗಳ ಸ್ವಚ್ಛತಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ.
ಗ್ರಾಮ ಪಂಚಾಯಿತಿಯ ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಯಕರ್ತರು ಗ್ರಾಮವನ್ನು ಸ್ವಚ್ಛ ಮತ್ತು ಸುಂದರವಾಗಿಡಲು ಶ್ರಮಿಸುತ್ತಿದ್ದು, ಸಾರ್ವಜನಿಕರು ಸಹ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
"ಸ್ವಚ್ಛ ಗ್ರಾಮ – ಆರೋಗ್ಯಕರ ಗ್ರಾಮ" ಎಂಬ ಧ್ಯೇಯದೊಂದಿಗೆ ಗ್ರಾಮ ನೈರ್ಮಲ್ಯ ಕಾರ್ಯಗಳು ಮುಂದುವರಿಯುತ್ತಿವೆ.
#ಗ್ರಾಮನೈರ್ಮಲ್ಯ #ಸಂತೆಮಾವತ್ತೂರು #ಗ್ರಾಮಪಂಚಾಯಿತಿ #ಸ್ವಚ್ಛಗ್ರಾಮ #ಸ್ವಚ್ಛಭಾರತಅಭಿಯಾನ

ಸಂತೆಮವತೂರು ಗ್ರಾಮ ಪಂಚಾಯಿತಿಸಂತೆಮವತೂರು ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವ ಉದ್ದೇಶದಿಂದ ...
02/06/2026

ಸಂತೆಮವತೂರು ಗ್ರಾಮ ಪಂಚಾಯಿತಿ

ಸಂತೆಮವತೂರು ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವ ಉದ್ದೇಶದಿಂದ ಚರಂಡಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗಿದೆ.
ಚರಂಡಿಯಲ್ಲಿದ್ದ ಹೂಳು, ಕಸ ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಗುತ್ತಿದ್ದು, ಗ್ರಾಮದಲ್ಲಿ ಸ್ವಚ್ಛತೆ ಮತ್ತು ಆರೋಗ್ಯಕರ ವಾತಾವರಣ ಕಾಪಾಡಲು ಗ್ರಾಮ ಪಂಚಾಯಿತಿ ಬದ್ಧವಾಗಿದೆ.
ಸ್ವಚ್ಛ ಗ್ರಾಮ – ಸುಂದರ ಗ್ರಾಮ ನಮ್ಮೆಲ್ಲರ ಜವಾಬ್ದಾರಿ.
ಗ್ರಾಮದ ಸ್ವಚ್ಛತಾ ಕಾರ್ಯಗಳಿಗೆ ಸಹಕರಿಸುತ್ತಿರುವ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳು.

ಚೌಡನಕುಪ್ಪೆ ಗ್ರಾಮ ಪಂಚಾಯಿತಿಕುಣಿಗಲ್ ತಾಲ್ಲೂಕು, ಹುಲಿಯೂರುದುರ್ಗ ಹೋಬಳಿ, ಚೌಡನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಲಿನ ಡೈರಿ ಹಾ...
02/06/2026

ಚೌಡನಕುಪ್ಪೆ ಗ್ರಾಮ ಪಂಚಾಯಿತಿ
ಕುಣಿಗಲ್ ತಾಲ್ಲೂಕು, ಹುಲಿಯೂರುದುರ್ಗ ಹೋಬಳಿ, ಚೌಡನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಲಿನ ಡೈರಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕ್ ಸಮೀಪದ ಚರಂಡಿಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಗಿದೆ.
ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಚರಂಡಿಯಲ್ಲಿದ್ದ ಹೂಳು, ಕಸ ಮತ್ತು ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲಾಗಿದೆ.
ಸ್ವಚ್ಛ ಗ್ರಾಮ – ಆರೋಗ್ಯಕರ ಗ್ರಾಮ ನಮ್ಮೆಲ್ಲರ ಹೊಣೆ.
ಗ್ರಾಮದ ಸ್ವಚ್ಛತೆಗಾಗಿ ಸಹಕರಿಸುತ್ತಿರುವ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳು.

ಪತ್ರಿಕಾ ಪ್ರಕಟಣೆಗಳು
30/05/2026

ಪತ್ರಿಕಾ ಪ್ರಕಟಣೆಗಳು

*ಕುಣಿಗಲ್*:ಮಾನ್ಯ ಆಡಳಿತ ಅಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ತುಮಕೂರು ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣ...
29/05/2026

*ಕುಣಿಗಲ್*:ಮಾನ್ಯ ಆಡಳಿತ ಅಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ತುಮಕೂರು ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಚರ್ಚಿಸಿ ಅಗತ್ಯ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಾಯಿತು. ಅಲ್ಲದೆ ಇಲಾಖಾವಾರು ಲಿಂಕ್ ಡಾಕ್ಯುಮೆಂಟ್ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಯೋಜನಾ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಸಹಾಯಕ ಲೆಕ್ಕಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

#ಜಿಲ್ಲಾಪಂಚಾಯತ್_ತುಮಕೂರು #ಸಾಮಾನ್ಯಸಭೆ #ಗ್ರಾಮಪಂಚಾಯಿತಿ

ಇಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿಡಸಾಲೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರ...
27/05/2026

ಇಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿಡಸಾಲೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿಯ ಆಡಳಿತ ಕಾರ್ಯಗಳು, ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

📍 ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕ ಸೇವೆಗಳು ಹ...
20/05/2026

📍 ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸಾರ್ವಜನಿಕ ಸೇವೆಗಳು ಹಾಗೂ ಕಚೇರಿ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಜಾರಿಗೆ ತರಲು ಅಗತ್ಯ ಸೂಚನೆಗಳನ್ನು ನೀಡಿದರು. ✅

#ಗ್ರಾಮಪಂಚಾಯಿತಿ #ಅಭಿವೃದ್ಧಿ

💧 ಸಾರ್ವಜನಿಕರ ಆರೋಗ್ಯವೇ ಮೊದಲ ಆದ್ಯತೆ 💧ಪಡುವಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುವಗೆರೆ ಗ್ರಾಮದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ...
16/05/2026

💧 ಸಾರ್ವಜನಿಕರ ಆರೋಗ್ಯವೇ ಮೊದಲ ಆದ್ಯತೆ 💧

ಪಡುವಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುವಗೆರೆ ಗ್ರಾಮದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮಸ್ಥರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

#ಕುಡಿಯುವನೀರು #ಗ್ರಾಮಪಂಚಾಯಿತಿ #ಪಡುವಗೆರೆ #ಸ್ವಚ್ಛನೀರು #ಜನಸೇವೆ

ಮಾನ್ಯ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ಕುಣಿಗಲ್ (ಆಡಳಿತ ಅಧಿಕಾರಿಗಳು) ರವರು ನಾಗಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ವಿಶೇಷ ಮಹಿಳಾ...
15/05/2026

ಮಾನ್ಯ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ಕುಣಿಗಲ್ (ಆಡಳಿತ ಅಧಿಕಾರಿಗಳು) ರವರು ನಾಗಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ವಿಶೇಷ ಮಹಿಳಾ ಗ್ರಾಮ ಸಭೆಗೆ ಭೇಟಿ ನೀಡಿ ಮಹಿಳಾ ಸಬಲೀಕರಣ, ಬಾಲ್ಯ ವಿವಾಹ ತಡೆ, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮಹಿಳಾ ವಿಶೇಷ ಯೋಜನೆಗಳು, ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳು, ಆರೋಗ್ಯ ಅರಿವು, ಮಕ್ಕಳ ಕಲ್ಯಾಣ ಯೋಜನೆಗಳು ಹಾಗೂ ಶ್ರೀ ಶಕ್ತಿ ಸಂಘಗಳ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
#ನಾಗಸಂದ್ರಗ್ರಾಮಪಂಚಾಯಿತಿ #ಮಹಿಳಾಗ್ರಾಮಸಭೆ #ಮಹಿಳಾಸಬಲೀಕರಣ #ನರೇಗಾಯೋಜನೆ #ಸ್ವಚ್ಛತೆ #ಆರೋಗ್ಯಅರಿವು #ಶ್ರೀಶಕ್ತಿಸಂಘ #ಗ್ರಾಮೀಣಅಭಿವೃ

ಕಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮೇಗೌಡನಪಾಳ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಹಿನ್ನೆಲೆ ಮಾನ್ಯ ಸಹಾಯಕ ನಿರ್ದೇಶಕರು ...
13/05/2026

ಕಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮೇಗೌಡನಪಾಳ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಹಿನ್ನೆಲೆ ಮಾನ್ಯ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ಕುಣಿಗಲ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೈಪ್‌ಲೈನ್ ದೋಷದಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವುದನ್ನು ಗಮನಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ, ಕುಡಿಯುವ ನೀರಿನ ಬೋರ್‌ವೆಲ್ ಅನ್ನು ಶೀಘ್ರ ದುರಸ್ತಿ ಮಾಡಿ ಗ್ರಾಮಸ್ಥರಿಗೆ ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನಿರ್ದೇಶನ ನೀಡಿದರು.
#ಕುಡಿಯುವನೀರು #ಗ್ರಾಮೀಣಉದ್ಯೋಗ

Address

Taluk Panchayath

572130

Alerts

Be the first to know and let us send you an email when Taluk Panchayath Kunigal posts news and promotions. Your email address will not be used for any other purpose, and you can unsubscribe at any time.

Contact The Organization

Send a message to Taluk Panchayath Kunigal:

  • Want your organization to be the top-listed Government Service?

Share