DC Udupi

DC Udupi Official Website of DC Office Udupi.

ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿಗೆ ದಿಡೀರ್ ಭೇಟಿ ನೀಡಿ ಪರಿಶೀಲಿಸಲಾಯಿತು. ದ್ವೀತಿಯ ಪಿಯುಸಿ ಅಂತಿಮ ಪರೀಕ್ಷೆಯ ಪಲಿತಾಂಶದಲ್ಲಿ ಪ್...
06/11/2024

ಸರಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿಗೆ ದಿಡೀರ್ ಭೇಟಿ ನೀಡಿ ಪರಿಶೀಲಿಸಲಾಯಿತು. ದ್ವೀತಿಯ ಪಿಯುಸಿ ಅಂತಿಮ ಪರೀಕ್ಷೆಯ ಪಲಿತಾಂಶದಲ್ಲಿ ಪ್ರಗತಿ ಸಾಧಿಸಲು ಕೈಗೊಂಡಿರು ಕ್ರಮಗಳನ್ನು ಪರಮಾರ್ಶಿಸಿ ಸೂಕ್ತ ನಿರ್ದೇಶನ ನೀಡಲಾಯಿತು

ಉಪ್ಪೂರು ವ್ಯವಸಾಯ ಸೇವಾ ಸರಕಾರಿ ಸಂಘ ಹಾವಂಜೆ ನ್ಯಾಯ ಬೆಲೆ ಅಂಗಡಿ – 34ಕ್ಕೆ ದಿಢೀರ್ ಭೇಟಿ ನೀಡಿ ಪಡಿತರ ಅಕ್ಕಿ ಹಂಚಿರುವ ವಿವರಗಳನ್ನು ಹಾಗೂ ದಾ...
06/11/2024

ಉಪ್ಪೂರು ವ್ಯವಸಾಯ ಸೇವಾ ಸರಕಾರಿ ಸಂಘ ಹಾವಂಜೆ ನ್ಯಾಯ ಬೆಲೆ ಅಂಗಡಿ – 34ಕ್ಕೆ ದಿಢೀರ್ ಭೇಟಿ ನೀಡಿ ಪಡಿತರ ಅಕ್ಕಿ ಹಂಚಿರುವ ವಿವರಗಳನ್ನು ಹಾಗೂ ದಾಸ್ತಾನು ಇರುವ ಪಡಿತರ ಅಕ್ಕಿಗೆ ತಾಳೆ ಮಾಡಿ ಪರಿಶೀಲಿಸಲಾಯಿತು. ಪಡಿತರ ಅಕ್ಕಿ ಹಾಗೂ ಸುಫಲ ಗೊಬ್ಬರವನ್ನು ಒಂದೇ ಹಾಲ್ನಲ್ಲಿ ದಾಸ್ತಾನು ಇಟ್ಟಿರುವುದು ಕಂಡು ಬಂದಿದ್ದು, ಪ್ರತ್ಯೇಕ ಕೊಠಡಿಗಳಲ್ಲಿ ಶೇಖರಿಸಿಡುವಂತೆ ತಿಳಿಸಲಾಯಿತು.

2024 ನೇ ಕನ್ನಡ ರಾಜ್ಯೋತ್ಸವದ ದಿನದಂದು ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಜಿಲ್ಲಾ ಮಟ್ಟದ ಸನ್ಮಾನಕ್ಕ...
31/10/2024

2024 ನೇ ಕನ್ನಡ ರಾಜ್ಯೋತ್ಸವದ ದಿನದಂದು ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಜಿಲ್ಲಾ ಮಟ್ಟದ ಸನ್ಮಾನಕ್ಕೆ ಆಯ್ಕೆಯಾಗಿರುವ ಉಡುಪಿ ಜಿಲ್ಲಾ ಸಾಧಕರ ವಿವರ

“ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ”ಯ ಪ್ರಯುಕ್ತ ದಿನಾಂಕ: 15.09.2024 ರಂದು ಉಡುಪಿ ಜಿಲ್ಲೆಯ ಗಡಿಭಾಗಗಳಾದ ಶಿರೂರು ಟೊಲ್ ಗೇಟಿನಿಂದ ಹೆಜ...
15/09/2024

“ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ”ಯ ಪ್ರಯುಕ್ತ ದಿನಾಂಕ: 15.09.2024 ರಂದು ಉಡುಪಿ ಜಿಲ್ಲೆಯ ಗಡಿಭಾಗಗಳಾದ ಶಿರೂರು ಟೊಲ್ ಗೇಟಿನಿಂದ ಹೆಜಮಾಡಿ ಸೇತುವೆ ವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ವಿವಿಧ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ “ಮಾನವ ಸರಪಳಿ” ಕಾರ್ಯಕ್ರಮವನ್ನು 1 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸಿ ಯಶಸ್ವಿಯಾಗಿ ಆಚರಿಸಲಾಗಿದೆ. ಜಿಲ್ಲೆಯ ಯುವ ಜನತೆ, ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿ ಸಿಬ್ಬಂದಿಗಳು ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿರುವುದು ಶ್ಲಾಘನೀಯ.
ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಎಲ್ಲಾ ಇಲಾಖೆಗಳ/ನಿಗಮ ಮಂಡಳಿಯ ಅಧಿಕಾರಿ/ ಸಿಬ್ಬಂದಿಗಳು, ಸರ್ಕಾರಿ/ ಖಾಸಗಿ ಶಾಲಾ-ಕಾಲೇಜಿನ ಬೋಧಕ/ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪ್ರಾಯೋಜಕರುಗಳು, ವಿವಿಧ ಸಮುದಾಯದ ಸಂಘ-ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು, ಪತ್ರಿಕಾ ಮಾಧ್ಯಮ ಮಿತ್ರರು, ವಿವಿಧ ಕಲಾ ತಂಡದವರು, ಭಾಗವಹಿಸಿದ ಎಲ್ಲಾ ಸಾರ್ವಜನಿಕರಿಗೆ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿನಂದನೆಗಳು. 500 ಮೀ ಉದ್ದದ ಭಾರತದ ಧ್ವಜ ಹಾಗೂ ನಾಡಧ್ವಜವನ್ನು ಪ್ರದರ್ಶಿಸಲು ಸಹಕರಿದ ಸಂಘ ಸಂಸ್ಥೆಗಳಿಗೆ ವಿಶೇಷ ಅಭಿನಂದನೆಗಳು.
ಜಿಲ್ಲಾ ಮಟ್ಟದ ಕಾರ್ಯಕ್ರಮದ ಉದ್ಟಾಟನಾ ಸಮಾರಂಭಕ್ಕೆ ಆಗಮಿಸಿದ ಗೌರವಾನ್ವಿತ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು, ಮುಖ್ಯವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ನ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ಅಪರ ಜಿಲ್ಲಾಧಿಕಾರಿ, ಸಹಾಯಕ ಕಮೀಷನರ್ ಹಾಗೂ ಎಲ್ಲಾ ತಹಶೀಲ್ದಾರರುಗಳು ಮತ್ತು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ವಿಶೇಷವಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ವಿಭಾಗ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ ಹಾಗೂ ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ, ಮುಜರಾಯಿ ಇಲಾಖೆ, ಆರೋಗ್ಯ ಇಲಾಖೆ ಯುವಜನ ಸೇವಾ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ಕೈಜೋಡಿಸಿರುವುದರಿಂದ ಹಾಗೂ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಭಾಗವಹಿಸಿದ ಕಾರಣ ಅತ್ಯಂತ ವಿಜೃಂಭಣೆಯಿಂದ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲು ಸಾದ್ಯವಾಗಿದೆ. ಅದ್ದರಿಂದ ತಾವೆಲ್ಲರೂ ಅಭಿನಂದಾನರ್ಹರು. ಮುಂದೆಯೂ ಇಂತಹ ಸರಕಾರಿ ಕಾರ್ಯಕ್ರಮಗಳಿಗೆ ತಮ್ಮ ಸಹಕಾರವನ್ನು ಕೋರುತ್ತಾ ತಮಗೆಲ್ಲರಿಗೂ ಅತ್ಯಂತ ಪ್ರೀತಿಪೂರ್ವಕ ಅಭಿನಂದನೆಗಳು.

ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಮಾಣಪತ್ರ ಪಡೆಯಿರಿ..ಸೆಪ್ಟಂಬರ್ ೧೫ ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯ...
12/09/2024

ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಮಾಣಪತ್ರ ಪಡೆಯಿರಿ..

ಸೆಪ್ಟಂಬರ್ ೧೫ ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ರಾಜ್ಯ ಸರ್ಕಾರದಿಂದ ಪ್ರಶಂಸನಾ ಪತ್ರವನ್ನು ಪಡೆಯಬಹುದಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರ ಛಾಯಾಚಿತ್ರವನ್ನು ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶ ನೀಡಲಾಗಿದೆ.

ಒಂದು ಫೋಟೋ ಫ್ರೇಮ್‌ನಲ್ಲಿ, ೫ ಸದಸ್ಯರವರೆಗೆ ಅವಕಾಶವಿದ್ದು, ಕುಟುಂಬಗಳು ಒಟ್ಟಿಗೆ ನಿಲ್ಲಲು, ಚಿತ್ರವನ್ನು ತೆಗೆದುಕೊಳ್ಳಲು, ಅದನ್ನು ಅಪ್‌ಲೋಡ್ ಮಾಡಲು ಮತ್ತು ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶವನ್ನು ಒದಗಿಸಲಾಗಿದ್ದು, ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು,ಪ್ರವಾಸಿಗರು ಮಾನವ ಸರಪಳಿಯಲ್ಲಿ ಭಾಗವಹಿಸುವ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು https://www.democracydaykarnataka.in/registration ನಲ್ಲಿ ನೊಂದಾಯಿಸಿಕೊAಡು ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಡೆಂಗ್ಯೂ  ಜ್ವರ ನಿಯಂತ್ರಣ ಎಲ್ಲರ ಜವಬ್ದಾರಿ
16/07/2024

ಡೆಂಗ್ಯೂ ಜ್ವರ ನಿಯಂತ್ರಣ ಎಲ್ಲರ ಜವಬ್ದಾರಿ

ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ  ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ
12/07/2024

ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ

ಉಡುಪಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ
12/07/2024

ಉಡುಪಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ

05/06/2024

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲು ಹಾಗೂ ನೀತಿ ಸಂಹಿತೆ ಜಾರಿಯಾದ ನಂತರ ದಿನಾಂಕ: 04-06-2024 ರಂದು ನಡೆದ ಮತ ಎಣಿಕಾ ಕಾರ್ಯವನ್ನು ಒಳಗೊಂಡಂತೆ ಲೋಕಸಭಾ ಚುನಾವಣೆ 2024ರ ಕಾರ್ಯವು ಈಗಾಗಲೇ ಯಶಸ್ವಿಯಾಗಿ ಮುಕ್ತಾಯಗೊಂಡಿರುತ್ತದೆ. ಚುನಾವಣಾ ಪರ್ವವನ್ನು ಯಶಸ್ವಿಗೊಳಿಸುವಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಮಗಳೂರು ಜಿಲ್ಲೆ, ಭದ್ರತಾ ಕೊಠಡಿಯ ಭದ್ರತೆ ಸೇರಿದಂತೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸೂಕ್ತ ಬಂದೋಬಸ್ತು ಒದಗಿಸಿದ ಪೊಲೀಸ್‌ ಅಧೀಕ್ಷಕರನ್ನೊಳಗೊಂಡ ಉಡುಪಿ ಹಾಗೂ ಚಿಕ್ಕಮಗಳೂರು ಪೊಲೀಸ್‌ ಇಲಾಖೆ, ಮತದಾನದ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಉಡುಪಿ – ಚಿಕ್ಕಮಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರನ್ನೊಳಗೊಂಡ ಜಿಲ್ಲಾ ಪಂಚಾಯತ್‌ ಹಾಗೂ ಇದರ ಅಧೀನ ಇಲಾಖೆಗಳು, ಅಪರ ಜಿಲ್ಲಾಧಿಕಾರಿ ಉಡುಪಿ ಮತ್ತು ಚಿಕ್ಕಮಗಳೂರು ನಿರ್ದೇಶಕರು ಎನ್‌ಐಸಿ, ಸಹಾಯಕ ಚುನಾವಣಾಧಿಕಾರಿಗಳು ಉಡುಪಿ ಚಿಕ್ಕಮಗಳೂರು, ಈ ಚುನಾವಣಾ ಕಾರ್ಯದಲ್ಲಿ ನಮ್ಮೊಂದಿಗೆ ಹಗಲಿರುಳನ್ನದೆ ಕಾರ್ಯ ನಿರ್ವಹಿಸಿದ ಉಭಯ ಜಿಲ್ಲೆಗಳ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಯವರು, ನೋಡೆಲ್‌ ಅಧಿಕಾರಿಗಳು, ಸೆಕ್ಟರ್‌ ಅಧಿಕಾರಿಗಳು FST, VST, VVT, ಹಾಗೂ ಚುನಾವಣೆ ಪ್ರಯುಕ್ತ ನೇಮಕ ಮಾಡಿರುವ ವಿವಿಧ ತಂಡಗಳು, ಕಂದಾಯ ಇಲಾಖಾ ಅಧಿಕಾರಿಗಳಾದ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ನನ್ನ ಕಛೇರಿಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು, ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ, ಎಲ್ಲಾ ಉಮೇದುದಾರರಿಗೆ ಮತ್ತು ಏಜೆಂಟರುಗಳಿಗೆ, ಕಾಲ ಕಾಲಕ್ಕೆ ಸರಿಯಾಗಿ ಚುನಾವಣಾ ಮಾಹಿತಿ ಭಿತ್ತರಿಸಿದ ಪತ್ರಿಕಾ ಮಾಧ್ಯಮದವರಿಗೆ ಮನಃಪೂರ್ವಕ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸ ಬಯಸುತ್ತೇನೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಎಲ್ಲಾ ಕೆಲಸ ಕಾರ್ಯಗಳಿಗೆ ತಮ್ಮೆಲ್ಲರ ಸಹಕಾರ ಹೀಗೆಯೆ ಮುಂದುವರಿಯಲಿ ಎಂದು ಆಶಿಸುತ್ತೇನೆ.

Udupi : Heat wave advisory for labour.
02/05/2024

Udupi : Heat wave advisory for labour.

24/04/2024
ಮತದಾನ ನಮ್ಮ ಹಕ್ಕು , ಚಲಾಯಿಸೋಣChief Electoral Officer Karnataka
19/04/2024

ಮತದಾನ ನಮ್ಮ ಹಕ್ಕು , ಚಲಾಯಿಸೋಣ
Chief Electoral Officer Karnataka

Address

Manipala

Alerts

Be the first to know and let us send you an email when DC Udupi posts news and promotions. Your email address will not be used for any other purpose, and you can unsubscribe at any time.

Share