06/09/2026
ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಕೆ. ಅಭಯಚಂದ್ರ ಜೈನ್ ಅವರ ಮೂಡುಬಿದಿರೆಯ ಸ್ವಗೃಹಕ್ಕೆ ಭೇಟಿ ನೀಡಿ, ಅವರ ಆಶೀರ್ವಾದ, ಅಮೂಲ್ಯ ಸಲಹೆ ಹಾಗೂ ಮಾರ್ಗದರ್ಶನ ಪಡೆದೆ..
ಈ ಸಂದರ್ಭದಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಯರಾದ, ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಸದಸ್ಯರಾದ ಎಚ್ . ವಸಂತ್ ಬೆರ್ನಾಡ್, ಮುಲ್ಕಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂಬಾರ್, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ಪೂಜಾರಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ್ ಕೋಟ್ಯಾನ್ ಮಟ್ಟು , ಡಿಸಿಸಿ ಸದಸ್ಯರು ಹಾಗೂ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ಹಸನಬ್ಬ ಯಾನೆ ಪುತ್ತು ಬಾವ, ಮುಲ್ಕಿ ಬ್ಲಾಕ್ ಕಾಂಗ್ರೆಸ್ನ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..
ಯುವ ನಾಯಕತ್ವಕ್ಕೆ ಹಿರಿಯರ ಮಾರ್ಗದರ್ಶನ – ಸಂಘಟನೆಯ ಬಲವರ್ಧನೆಗೆ ಹೊಸ ಹೆಜ್ಜೆ.
ಜೈ ಕಾಂಗ್ರೆಸ್! 🇮🇳