29/08/2026
ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ.
ಮೈಸೂರಿನ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ DK Shivakumar ಅವರು, ವಿವಿಧ ಮಠಾಧೀಶರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರೊಂದಿಗೆ ನೆರವೇರಿಸಿದರು.
ಈ ಮಹೋತ್ಸವದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಅವಧೂತ ದತ್ತ ಪೀಠದ ಶ್ರೀ ದತ್ತ ವಿಜಯಾನಂದ ತೀರ್ಥ ಮಹಾಸ್ವಾಮೀಜಿಗಳು, ಸಚಿವರಾದ ಶ್ರೀ ಪುಟ್ಟರಂಗಶೆಟ್ಟಿ, Dr Yathindra Siddaramaiah , ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀ ತನ್ವೀರ್ ಸೇಠ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.