30/08/2025
ಬದಲಾವಣೆಗಾಗಿ ಕೊಡುಗೆ : ಗುರುಪುರ ಕೈಕಂಬದಲ್ಲಿ SDPI ನಾಯಕರ ಸಭೆ
"ಬದಲಾವಣೆಗಾಗಿ ಕೊಡುಗೆ" ಎಂಬ ಘೋಷಣೆಯೊಂದಿಗೆ ಗುರುಪುರ, ಕೈಕಂಬ, ಅಡ್ಡೂರು, ಮಲ್ಲೂರು, ಉಳಾಯಿಬೆಟ್ಟು, ಬಜ್ಪೆ ಮತ್ತು ಮೂಡಬಿದ್ರೆ ವ್ಯಾಪ್ತಿಯ ಎಸ್ಡಿಪಿಐ ನಾಯಕರ ಸಭೆಯು SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಉಸ್ಮಾನ್ ಗುರುಪುರ ರವರ ಅಧ್ಯಕ್ಷತೆಯಲ್ಲಿ ಗುರುಪುರ ಕೈಕಂಬದ ಮೇಘ ಪ್ಲಾಝ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮೂಡಬಿದ್ರೆ ಕ್ಷೇತ್ರ ಉಪಾಧ್ಯಕ್ಷರಾದ ಆಸೀಫ್ ಕೋಟೆಬಾಗಿಲು ಸ್ವಾಗತಿಸಿದರು. ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ ಯವರು ಪ್ರಾಸ್ತಾವಿಕ ಮಾತನಾಡಿದರು. ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆಯವರು 'ಬದಲಾವಣೆಗಾಗಿ ಕೊಡುಗೆ' ಎಂಬ ವಿಚಾರವನ್ನು ಮಂಡಿಸಿದರು. ಸಮಾರೋಪ ಭಾಷಣವನ್ನು ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಅಬ್ದುಲ್ ಜಲೀಲ್ ಕೆ ಯವರು ಮಾಡಿದರು. ಮಂಗಳೂರು ಉತ್ತರ ಕ್ಷೇತ್ರ ಕಾರ್ಯದರ್ಶಿ ಶಫೀಕ್ ಮಲ್ಲೂರು ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದಗೈದರು. ಈ ಸಂದರ್ಭದಲ್ಲಿ SDPI ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಮೀರ್ ಜೋಕಟ್ಟೆ, ಜಿಲ್ಲಾ ಸಮಿತಿ ಸದಸ್ಯ ಶಾಹಿಕ್ ಅಡ್ಡೂರು, ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಮ್ತಿಯಾಝ್ ಅಡ್ಡೂರು, ಮೂಡಬಿದ್ರೆ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇರ್ಷಾದ್ ಬಜ್ಪೆ, ಗುರುಪುರ ಬ್ಲಾಕ್ ಅಧ್ಯಕ್ಷರಾದ ರಿಯಾಝ್ ಅಡ್ಡೂರು, ಅಡ್ಯಾರ್ ಬ್ಲಾಕ್ ಅಧ್ಯಕ್ಷರಾದ ಅಝರ್ ಉಳಾಯಿಬೆಟ್ಟು, ಕಾರ್ಯದರ್ಶಿ ಇಕ್ಬಾಲ್ ವಾಮಂಜೂರು ಇತರರು ಉಪಸ್ಥಿತರಿದ್ದರು.