Raghupathi Bhat

Raghupathi Bhat Social Activist
BJP Worker

04/09/2026

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿ, ಸಂಭ್ರಮ ಜರುಗಿದವು. ಈ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನ್ಮಾಷ್ಟಮಿ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.

ಸಮಸ್ತ ಪತ್ರಿಕಾ ವಿತರಕ ಬಂಧುಗಳಿಗೆ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿಮ್ಮ ಅವಿರತ ಸೇವೆ ಮತ್ತು ಪರಿಶ್ರಮಕ್ಕೆ ಹೃತ್ಪ...
04/09/2026

ಸಮಸ್ತ ಪತ್ರಿಕಾ ವಿತರಕ ಬಂಧುಗಳಿಗೆ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ನಿಮ್ಮ ಅವಿರತ ಸೇವೆ ಮತ್ತು ಪರಿಶ್ರಮಕ್ಕೆ ಹೃತ್ಪೂರ್ವಕ ಅಭಿನಂದನೆಗಳು.

ಕೃಷ್ಣಾಯ ವಾಸುದೇವಾಯ ಹರಯೇ ಪರಮಾತ್ಮನೇ ।ಪ್ರಣತಕ್ಲೇಶನಾಶಾಯ ಗೋವಿಂದಾಯ ನಮೋ ನಮಃ ॥ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭ...
04/09/2026

ಕೃಷ್ಣಾಯ ವಾಸುದೇವಾಯ ಹರಯೇ ಪರಮಾತ್ಮನೇ ।
ಪ್ರಣತಕ್ಲೇಶನಾಶಾಯ ಗೋವಿಂದಾಯ ನಮೋ ನಮಃ ॥
ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು

ಶ್ರೀಕೃಷ್ಣನ ದಿವ್ಯ ಕೃಪೆಯು ನಿಮ್ಮೆಲ್ಲರ ಜೀವನದಲ್ಲಿ ಸುಖ, ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತುಂಬಲಿ.

03/09/2026

ಬೈಂದೂರು ತಾಲೂಕಿನ ಗೋಳಿಹೊಳೆಯ ಶ್ರೀ ಬಿಳಿನೆಲೆ ವಿನಾಯಕ ದೇವಸ್ಥಾನದಲ್ಲಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಚಾತುರ್ಮಾಸ್ಯ ವ್ರತಾಚರಣೆಯ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಪೂಜ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

“ಈ ಸಂದರ್ಭದಲ್ಲಿ ಪಾಂಗಳ ಸುಧಾಕರ್ ಅಮೀನ್, ಓಬು ಪೂಜಾರಿ, ಮಹೇಶ್ ಠಾಕೂರ್, ಸುವರ್ಧನ್ ನಾಯಕ್,ಉಪೇಂದ್ರ ನಾಯಕ್,ವಿಶು ಕಲ್ಯಾಣಪುರ, ಸಂತೋಷ್ ಬೊಳ್ಜೆ, ಗಣೇಶ್ ಕುತ್ಪಾಡಿ,ರಿಕೇಶ್ ಪಾಲನ್, ಶಿವಪ್ರಸಾದ್ ಬೆಂಗ್ರೆ,ಅಶೋಕ್ ಭಂಡಾರಿ,ವಿನಯ ಕರಂಬಳ್ಳಿ, ಸಚಿನ್ ಪೂಜಾರಿ, ದಯಾನಂದ ಉಗ್ಗೇಲ್ಬೆಟ್ಟು, ಮಧುಸೂಧನ್ ಪೂಜಾರಿ, ಪ್ರವೀಣ್, ಭಾಸ್ಕರ್ ಪೂಜಾರಿ, ರಘುನಾಥ್ ಮಾಬಿಯಾನ್ ,ಉಮೇಶ್, ಕುಶಲ್ ಅಮೀನ್, ಧರಣೀಶ್ ಸೇರಿದಂತೆ ಸಮಾಜದ ಹಿರಿಯರು ಹಾಗೂ ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು."

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಪ್ರಯುಕ್ತ ಇಂದು ದಿನಾಂಕ 30-08-2026 ರ...
30/08/2026

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಪ್ರಯುಕ್ತ ಇಂದು ದಿನಾಂಕ 30-08-2026 ರಂದು ಬನ್ನಂಜೆ ನಾರಾಯಣ ಆಡಿಟೊರಿಯಂ ಇಲ್ಲಿ ಆಯೋಜಿಸಲಾದ "ಗುರು ಸಂದೇಶ ಸಾಮರಸ್ಯ ಜಾಥಾ ಮತ್ತು ರಾಜ್ಯ ಮಟ್ಟದ ಭಾಷಣ ಸ್ಪರ್ಧೆ" ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಶ್ರೀ. ಕೆ. ರಘುಪತಿ ಭಟ್ ಅವರು ಭಾಗವಹಿಸಿದರು

ನಾಡಿನ ಸಮಸ್ತ ಜನತೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಹಾರ್ದಿಕ ಶುಭಾಶಯಗಳು.ರಾಯರ ಭಕ್ತಿ, ಸೇವೆ ಹಾಗೂ ಸತ್ಯಮಾರ್ಗದ ಸಂದೇಶಗಳು ನ...
30/08/2026

ನಾಡಿನ ಸಮಸ್ತ ಜನತೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಹಾರ್ದಿಕ ಶುಭಾಶಯಗಳು.

ರಾಯರ ಭಕ್ತಿ, ಸೇವೆ ಹಾಗೂ ಸತ್ಯಮಾರ್ಗದ ಸಂದೇಶಗಳು ನಮ್ಮೆಲ್ಲರ ಬದುಕಿಗೆ ಸದಾ ದಾರಿದೀಪವಾಗಿವೆ. ಶ್ರೀ ಗುರು ರಾಯರ ದಿವ್ಯ ಆಶೀರ್ವಾದವು ನಾಡಿನ ಪ್ರತಿಯೊಬ್ಬರ ಮೇಲೂ ಸದಾ ಇರಲಿ; ಎಲ್ಲೆಡೆ ಶಾಂತಿ, ಆರೋಗ್ಯ, ಸುಖ ಮತ್ತು ಸಮೃದ್ಧಿ ನೆಲೆಸಲಿ ಎಂದು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ.

ರಾಷ್ಟ್ರೀಯ ಕ್ರೀಡಾ ದಿನ.ಭಾರತದ ಹಾಕಿ ದಂತಕಥೆ ಮೇಜ‌ರ್ ಧ್ಯಾನ್‌ ಚಂದ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.ದೇಶದ ಸಮಸ್ತ ಕ್ರೀಡಾ ಸಾಧಕರಿಗೆ ...
29/08/2026

ರಾಷ್ಟ್ರೀಯ ಕ್ರೀಡಾ ದಿನ.
ಭಾರತದ ಹಾಕಿ ದಂತಕಥೆ ಮೇಜ‌ರ್ ಧ್ಯಾನ್‌ ಚಂದ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
ದೇಶದ ಸಮಸ್ತ ಕ್ರೀಡಾ ಸಾಧಕರಿಗೆ ಮತ್ತು ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಗಳು.

ಬಿಲ್ಲವ ಯುವ ವೇದಿಕೆ ಬ್ರಹ್ಮಾವರ - ನೂತನ ಪದಾಧಿಕಾರಿಗಳ ಪದಗ್ರಹಣ - ರಘುಪತಿ ಭಟ್ ಭಾಗಿಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ, ಬಿಲ್ಲವ ಯುವ...
28/08/2026

ಬಿಲ್ಲವ ಯುವ ವೇದಿಕೆ ಬ್ರಹ್ಮಾವರ - ನೂತನ ಪದಾಧಿಕಾರಿಗಳ ಪದಗ್ರಹಣ - ರಘುಪತಿ ಭಟ್ ಭಾಗಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ, ಬಿಲ್ಲವ ಯುವ ವೇದಿಕೆ ಬ್ರಹ್ಮಾವರ ಇವರ ವತಿಯಿಂದ ಬಿಲ್ಲವ ಯುವ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಂದು ದಿನಾಂಕ 28-08-2026ರಂದು ನಾರಾಯಣ ಗುರು ಸ‌ಭಾಭವನ ಬ್ರಹ್ಮಾವರ ಇಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿಯ ನಿಕಟಪೂರ್ವ ಶಾಸಕರಾದ ಕೆ. ರಘುಪತಿ ಭಟ್ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ, ಯುವಕರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಮಾಜದ ಒಗ್ಗಟ್ಟು ಹಾಗೂ ಅಭಿವೃದ್ಧಿಗೆ ಶ್ರಮಿಸಬೇಕು. ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸಂಘದ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಿ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಪದಾಧಿಕಾರಿಗಳು, ಬಿಲ್ಲವ ಯುವ ವೇದಿಕೆಯ ನೂತನ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿ ಸಂಘದ ಅಭಿವೃದ್ಧಿಗೆ ಬದ್ಧತೆಯನ್ನು ವ್ಯಕ್ತಪಡಿಸಿದರು.

ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನದಲ್ಲಿ ಭಕ್ತರಿಗೆ ಅಗತ್ಯವಾದ...
28/08/2026

ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನದಲ್ಲಿ ಭಕ್ತರಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ದಾನಿಗಳ ಸಹಕಾರದಲ್ಲಿ ರೂ. 35.00 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸ್ನಾನ ಗೃಹ, ಶೌಚಾಲಯ, ಕೈಕಾಲು ತೊಳೆಯುವ ವ್ಯವಸ್ಥೆ ನವೀಕರಣ ಕಾಮಗಾರಿಗಳ ಹಸ್ತಾಂತರ ಹಾಗೂ ಸಮರ್ಪಣಾ ಕಾರ್ಯಕ್ರಮವು ಭಕ್ತರ ಸಮ್ಮುಖದಲ್ಲಿ ಇಂದು ದಿನಾಂಕ 28-08-2026 ರಂದು ನೆರವೇರಿತು.

ಉಡುಪಿಯ ನಿಕಟಪೂರ್ವ ಶಾಸಕರು, ಶ್ರೀ ವೇಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಕೆ. ರಘುಪತಿ ಭಟ್ ಅವರು ನೂತನ ಕಾಮಗಾರಿಗಳನ್ನು ಉದ್ಘಾಟಿಸಿ ದೇವಸ್ಥಾನಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತರು, ವಿಶೇಷವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಆಗಮಿಸುವ ಸಾವಿರಾರು ಭಕ್ತರಿಗೆ ಈ ನೂತನ ಸೌಲಭ್ಯಗಳು ಹೆಚ್ಚಿನ ಅನುಕೂಲ ಕಲ್ಪಿಸಲಿವೆ. ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ವೈಯಕ್ತಿಕ ಕೊಡುಗೆಯನ್ನು ನೀಡುವ ಮೂಲಕ ದಾನಿಗಳು ತೋರಿರುವ ಸೇವಾಭಾವ ಹಾಗೂ ಧಾರ್ಮಿಕ ನಿಷ್ಠೆ ಶ್ಲಾಘನೀಯವಾಗಿದೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ದಾನಿಗಳು ಹಾಗೂ ಭಕ್ತರ ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಈ ಸೇವಾ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದರು.

ದಿll ಶ್ರೀಮತಿ ಪಿ. ಪಾರ್ವತಿ ಭಟ್, ವಾಸುಕಿ ನಿಲಯ, ವಿ.ಎಂ.ನಗರ, ದೊಡ್ಡಣಗುಡ್ಡೆ ಇವರ ಸ್ಮರಣಾರ್ಥವಾಗಿ ಅವರ ಮಕ್ಕಳ ಕೊಡುಗೆ ನೂತನ ಸ್ನಾನಗೃಹ ಮತ್ತು ಶೌಚಾಲಯ ಹಾಗೂ ದಿll ಪದ್ಮಕ್ಕ ಮತ್ತು ದಿll ಕೆ.ಎಸ್ ನಾರಾಯಣ ಭಟ್ ಇವರ ಸ್ಮರಣಾರ್ಥ ಮಕ್ಕಳ ಕೊಡುಗೆ ಕೈಕಾಲು ತೊಳೆಯುವ ವ್ಯವಸ್ಥೆ ನವೀಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ದಾನಿಗಳು, ಭಕ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

"ಮಾನವಕುಲಕ್ಕೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು" ಎಂದು ಸಾರಿದ ಮಹಾನ್ ಸಮಾಜ ಸುಧಾರಕ ಜಗದ್ಗುರು ಶ್ರೀ ನಾರಾಯಣ ಗುರುಗಳ ಜಯಂತಿಯಂದು ಶತ ಶತ ನಮ...
28/08/2026

"ಮಾನವಕುಲಕ್ಕೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು" ಎಂದು ಸಾರಿದ ಮಹಾನ್ ಸಮಾಜ ಸುಧಾರಕ ಜಗದ್ಗುರು ಶ್ರೀ ನಾರಾಯಣ ಗುರುಗಳ ಜಯಂತಿಯಂದು ಶತ ಶತ ನಮನಗಳು

Address

Udupi
576102

Alerts

Be the first to know and let us send you an email when Raghupathi Bhat posts news and promotions. Your email address will not be used for any other purpose, and you can unsubscribe at any time.

Contact The Organization

Send a message to Raghupathi Bhat:

Shortcuts

Share