17/08/2026
ಸಿದ್ಧಾಪುರ: ಆನೆ ತುಳಿತಕ್ಕೆ ಕಾರ್ಮಿಕ ಬಲಿ – ಸಿಐಟಿಯು (CITU) ಹಾಗೂ ಸಾರ್ವಜನಿಕರಿಂದ ರಸ್ತೆ ತಡೆ ಪ್ರತಿಭಟನೆ!
ಸಿದ್ಧಾಪುರ ಸಮೀಪದ ಶಿಲ್ಪಿ ತೋಟದಲ್ಲಿ ಇಂದು ಬೆಳಿಗ್ಗೆ ಕಾಡಾನೆ ದಾಳಿ ನಡೆಸಿದ್ದು, ಕೆಲಸ ಮಾಡುತ್ತಿದ್ದ ಗೋಪಾಲ್ (45) ಎಂಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಜಾದವ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಡಾನೆಗಳ ಹಾವಳಿಯಿಂದ ಆಕ್ರೋಶಗೊಂಡ ಸಿಐಟಿಯು (CITU) ಕಾರ್ಮಿಕ ಸಂಘಟನೆ ಹಾಗೂ ಸಾರ್ವಜನಿಕರು ಸಿದ್ಧಾಪುರ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಕಾಡಾನೆ ದಾಳಿಗೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.